alex Certify BIG NEWS: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 7 ರಂದು ದೆಹಲಿಗೆ ತೆರಳಲಿದ್ದಾರೆ. ಸಿಎಂ ದೆಹಲಿ ಪ್ರವಾಸ ನಿಗದಿಯಾಗುತ್ತಿದ್ದಂತೆ ಸಚಿವ ಸ್ಥಾನಾಕಾಂಕ್ಷಿಗಳು ಚುರುಕುಗೊಂಡಿದ್ದಾರೆ.

ಸಿಎಂ ದೆಹಲಿ ಭೇಟಿ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಅವಕಾಶ ಪಡೆದುಕೊಳ್ಳಲು ಪ್ರಯತ್ನ ಆರಂಭಿಸಿದ್ದಾರೆ. ಸಂಪುಟ ಪುನರ್ ರಚನೆ ಶೀಘ್ರವೇ ಮಾಡಬೇಕೆಂಬ ಒತ್ತಡ ಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೇಳಿಬಂದಿದೆ. ಕೆಲವು ಶಾಸಕರು ದೆಹಲಿ ಮಟ್ಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿ ಒತ್ತಡ ಹೇರಲು ಮುಂದಾಗಿದ್ದು, ದೆಹಲಿಗೆ ತೆರಳಲಿದ್ದಾರೆ. ಆದರೆ, ಐದು ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹೈಕಮಾಂಡ್ ಬ್ಯುಸಿಯಾಗಿರುವುದರಿಂದ ಚುನಾವಣೆ ಮುಗಿದ ಮೇಲೆ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...