alex Certify ‘ಸಿದ್ದರಾಮೋತ್ಸವ’ ಕ್ಕೆ ತೆರಳುತ್ತಿರುವ ವಾಹನದ ಮೇಲೆ ಬಿಜೆಪಿ ಶಾಸಕರ ಫೋಟೋ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿದ್ದರಾಮೋತ್ಸವ’ ಕ್ಕೆ ತೆರಳುತ್ತಿರುವ ವಾಹನದ ಮೇಲೆ ಬಿಜೆಪಿ ಶಾಸಕರ ಫೋಟೋ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯದ ವಿವಿಧ ಭಾಗಗಳಿಂದ 5 ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಈ ಅದ್ದೂರಿ ಸಮಾರಂಭ ನಡೆಸುವ ಕುರಿತು ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರ ಮಧ್ಯೆ ಬಿಜೆಪಿ ನಾಯಕರು ನೇರವಾಗಿಯೇ ವಾಗ್ದಾಳಿ ನಡೆಸಿದ್ದರು. ಶಕ್ತಿ ಪ್ರದರ್ಶನ ನಡೆಸಲು ಸಿದ್ಧರಾಮಯ್ಯನವರು ಮುಂದಾಗಿದ್ದು, ಆದರೆ ಮತ್ತೆ ಮುಖ್ಯಮಂತ್ರಿಯಾಗುವ ಅವರ ಕನಸು ಕನಸಾಗಿಯೇ ಉಳಿಯಲಿದೆ ಎಂದು ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದರು.

ಆದರೆ ‘ಸಿದ್ದರಾಮೋತ್ಸವ’ ಕ್ಕೆ ತೆರಳುತ್ತಿರುವ ವಾಹನಗಳ ಮೇಲೆ ಸಿದ್ದರಾಮಯ್ಯನವರ ಫೋಟೋದೊಂದಿಗೆ ಸುರಪುರ ಕ್ಷೇತ್ರದ ಬಿಜೆಪಿ ಶಾಸಕ ನರಸಿಂಹ ನಾಯಕ ಅವರ ಫೋಟೋ ಇರುವುದು ಅಚ್ಚರಿಗೆ ಕಾರಣವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಶಾಸಕರು, ವಾಹನಗಳಿಗೆ ನನ್ನ ಭಾವಚಿತ್ರ ಅಂಟಿಸಬೇಡಿ. ಇದರಿಂದ ಪಕ್ಷಕ್ಕೆ ಧಕ್ಕೆಯಾಗುತ್ತದೆ. ಸ್ವಯಂ ಪ್ರೇರಿತರಾಗಿ ಅಭಿಮಾನದಿಂದ ಈ ಕಾರ್ಯಕ್ರಮದಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು ಎಂದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...