alex Certify BREAKING NEWS: ಬಿಜೆಪಿ ನಾಯಕ, ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ನಾಯಕ, ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ಭೋಪಾಲ್: ಖಾಂಡ್ವಾ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಗುರುಗಾಂವ್ ಮೇದಾಂತ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗಂಭೀರ ಸ್ಥಿತಿಯಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ, ಅವರಿಗೆ ಕೊರೊನಾ ಸೋಂಕು ಕೂಡ ತಗುಲಿತ್ತು. ನಂದಕುಮಾರ್ ಸಿಂಗ್ ಚೌಹಾಣ್ ಅವರ ಪುತ್ರ ಹರ್ಷವರ್ಧನ್ ಚೌಹಾಣ್ ತಮ್ಮ ತಂದೆಯ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷರಾಗಿಯೂ ನಂದಕುಮಾರ್ ಸಿಂಗ್ ಅವರು ಕಾರ್ಯನಿರ್ವಹಿಸಿದ್ದರು. ಜನವರಿ 11 ರಂದು ಅವರ ಆರೋಗ್ಯಸ್ಥಿತಿ ಬಿಗಡಾಯಿಸಿದ್ದರಿಂದ ಭೋಪಾಲ್ ನಿಂದ ದೆಹಲಿಯ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮೃತದೇಹವನ್ನು ಏರ್ ಆಂಬುಲೆನ್ಸ್ ಮೂಲಕ ಖಾಂಡ್ವಾ ವಾಯುನೆಲೆಗೆ ತರಲಾಗುವುದು. ಅಲ್ಲಿಂದ ಬುರ್ಹಾನ್ ಪುರಕ್ಕೆ ಕೊಂಡೊಯ್ಯಲಾಗುವುದು. ಶಾಪುರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಂದಕುಮಾರ್ ಸಿಂಗ್ ನಿಧನಕ್ಕೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸೇರಿ ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...