alex Certify BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ಆದೇಶದಂತೆ ಬಿ.ವೈ.ವಿಜಯೇಂದ್ರ ಪಾದಯಾತ್ರೆ: ಯತ್ನಾಳ್ ಹೇಳಿಕೆಗೆ ವ್ಯಂಗ್ಯವಾಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ನಮಗೆ ಬುದ್ಧಿವಾದ ಹೇಳುವ ಮೊದಲು ತಮ್ಮ ಮನೆ ಸರಿಪಡಿಸಿಕೊಳ್ಳಲಿ. ಅವರದ್ದು ಮೂರು ಬಾಗಿಲೋ, ಆರು ಬಾಗಿಲೋ ಅಂತಾರಲ್ಲ ಹಾಗಾಗಿದೆ. ಸ್ವಪಕ್ಷದ ವಿರುದ್ಧವೇ ಬಿಜೆಪಿ ನಾಯಕರು ಹೇಳುತ್ತಿರುವ ಹೇಳಿಕೆಗಳನ್ನು ನೋಡಿದರೆ ಬಿಜೆಪಿಗೆ ಎಷ್ಟು ಬಾಗಿಲು ಎಂಬುದು ಗೊತ್ತಾಗುತ್ತಿಲ್ಲ ಎಂದು ಟಾಂಗ್ ನೀಡಿದರು.

ಮುಡಾ ಹಗರಣದ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ. ಅವರ ಪಾಡಿಗೆ ಅವರು ನಡೆದು ಹೋಗುವುದಾದರೆ ನಮ್ಮ ಅಭ್ಯಂತರವಿಲ್ಲ. ಆದರೆ ಪಾದಯಾತ್ರೆ ಹೋರಾಟಕ್ಕೆ ಅನುಮತಿ ಇಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ಜರುಗಿಸುತ್ತೇವೆ. ಜನರಿಗೆ ತೊಂದರೆಯಾದ್ರೆ ಮಾತ್ರ ಸುಮ್ಮನಿರಲ್ಲ ಎಂದು ಹೇಳಿದರು.

ಇನ್ನು ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ನಾವು ಪಾದಯಾತ್ರೆ ಮಾಡಲ್ಲ. ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶ ಮಾದರಿಯಲ್ಲಿ ತಿಳಿಸುತ್ತೇವೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...