alex Certify ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ ವಿರುದ್ಧ ದೂರು

ಲಕ್ಷ್ಮೇಶ್ವರ: ಬಿಜೆಪಿಗೆ ಮತ ಹಾಕದಂತೆ ಸ್ವಾಮೀಜಿ ಒಬ್ಬರು ಪ್ರಮಾಣ ಮಾಡಿಸಿದ ಘಟನೆ ಆದರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಸ್ವಾಮೀಜಿ ವಿರುದ್ಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆದರಹಳ್ಳಿ ಗ್ರಾಮದ ಸ್ವಾಮೀಜಿ ಒಳ ಮೀಸಲಾತಿ ಕಾರಣಕ್ಕೆ ಬಿಜೆಪಿಗೆ ಮತ ಹಾಕದಂತೆ ಲಂಬಾಣಿ ಬಂಜಾರ ಸಮಾಜದ ಜನರಿಂದ ಪ್ರಮಾಣ ಮಾಡಿಸಿದ್ದಾರೆ. ಬಿಜೆಪಿ ತಿರಸ್ಕರಿಸಿ ಕಾಂಗ್ರೆಸ್ ಅಥವಾ ಜೆಡಿಎಸ್ ಪಕ್ಷಕ್ಕೆ ಮತ ಹಾಕಿ ಎಂದಿದ್ದಾರೆ. ಒಳ ಮೀಸಲಾತಿ ವಿರೋಧಿಸಿ ಪ್ರತಿಭಟನೆ ನಡೆಸೋಣ. ಒಳ ಮೀಸಲಾತಿಯಿಂದ ಲಂಬಾಣಿ ಸೇರಿದಂತೆ ವಿವಿಧ ಸಮಾಜಕ್ಕೆ ಅನ್ಯಾಯವಾಗಿದೆ. ಹಾಗಾಗಿ ಬಿಜೆಪಿಗೆ ಮತ ಹಾಕಬೇಡಿ ಎಂದು ಸ್ವಾಮೀಜಿ ಪ್ರಮಾಣ ಮಾಡಿಸಿದ್ದಾರೆ. ಸ್ವಾಮೀಜಿ ವಿರುದ್ಧ ಚುನಾವಣಾ ಅಧಿಕಾರಿ ಮಾರುತಿ ರಾಥೋಡ್ ದೂರು ನೀಡಿದ್ದು, ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...