alex Certify ಪ್ರಚಾರದ ವೇಳೆಯಲ್ಲೇ ಹೃದಯಘಾತದಿಂದ ಬಿಜೆಪಿ ಕಾರ್ಯಕರ್ತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಚಾರದ ವೇಳೆಯಲ್ಲೇ ಹೃದಯಘಾತದಿಂದ ಬಿಜೆಪಿ ಕಾರ್ಯಕರ್ತ ಸಾವು

ಮಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರದ ವೇಳೆಯಲ್ಲೇ ಹೃದಯಘಾತದಿಂದ ಕುಸಿತು ಬಿದ್ದು ಬಿಜೆಪಿ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕಿನ ಕಾವಲ ಮೂಡೂರು ಗ್ರಾಮದ ಕಲಾಯಿ ಬಳಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ. ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಪ್ರವೀಣ್ ನಾಯಕ್(45) ಮೃತಪಟ್ಟವರು. ಪ್ರವೀಣ್ ನಾಯಕ್ ಮತ್ತು ಅವರ ಜೊತೆಗಾರರಾದ ಬಿಜೆಪಿ ಕಾರ್ಯಕರ್ತರು ತಮ್ಮ ಸುತ್ತಲಿನ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದಾರೆ. ಪ್ರವೀಣ್ ನಾಯಕ್ ಅವರು ಎದೆ ನೋವೆಂದು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜನಾನುರಾಗಿಯಾಗಿದ್ದ ಪ್ರವೀಣ್ ನಾಯಕ್ ಮುಲ್ಕಾಜೆ ಮಾಡದಲ್ಲಿ ಸ್ಟುಡಿಯೋ ನಡೆಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...