alex Certify ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕರ ಖರೀದಿ ಪ್ರಕರಣ: ಬಿ.ಎಲ್. ಸಂತೋಷ್ ಗೆ ಮತ್ತೆ ನೋಟಿಸ್

ಹೈದರಾಬಾದ್: ಬಿ.ಆರ್.ಎಸ್. ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಮತ್ತೊಮ್ಮೆ ನೋಟಿಸ್ ನೀಡಲು ತೆಲಂಗಾಣ ಹೈಕೋರ್ಟ್ ಎಸ್ಐಟಿಗೆ ನಿರ್ದೇಶನ ನೀಡಿದೆ.

ನವೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿಯಿಂದ ಸಂತೋಷ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ವಿಚಾರಣೆಗೆ ಅವರು ಹಾಜರಾಗಿರಲಿಲ್ಲ.

ಪೂರ್ವ ನಿರ್ಧರಿತ ಪ್ರವಾಸ ಕಾರ್ಯಕ್ರಮಗಳಿಂದಾಗಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಸಂತೋಷ್ ಕೋರಿದ್ದಾರೆ ಎಂದು ತೆಲಂಗಾಣದ ಅಡ್ವೋಕೇಟ್ ಜನರಲ್ ಬಿ.ಎಸ್. ಪ್ರಸಾದ್ ಹೈಕೋರ್ಟಿಗೆ ತಿಳಿಸಿದ್ದಾರೆ.

ವಾದ ಆಲಿಸಿದ ನ್ಯಾಯಮೂರ್ತಿಗಳು, ನವೆಂಬರ್ 29ಕ್ಕೆ ವಿಚಾರಣೆ ಮುಂದೂಡಿದ್ದಾರೆ. ಎಸ್ಐಟಿ ಮುಂದೆ ಹಾಜರಾಗಲು ಸಂತೋಷ್ ಅವರಿಗೆ ನ್ಯಾಯ ಸಮ್ಮತವಾದ ಕಾಲಾವಕಾಶ ನೀಡಿ ಮತ್ತೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...