alex Certify ಸ್ಯಾನಿಟೈಸರ್ ಬಾಟಲಿ ಸ್ಪೋಟ: ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾನಿಟೈಸರ್ ಬಾಟಲಿ ಸ್ಪೋಟ: ನಾಲ್ವರು ವಿದ್ಯಾರ್ಥಿಗಳು ಅಸ್ವಸ್ಥ

ಉಡುಪಿ: ಕಸದ ರಾಶಿಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಸ್ಯಾನಿಟೈಸರ್ ಬಾಟಲಿಗೆ ಬೆಂಕಿ ತಗುಲಿ ಸ್ಪೋಟಗೊಂಡಿದ್ದು, ನಾಲ್ವರ ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.

ಹೆಬ್ರಿ ಆಶ್ರಮ ಹಾಸ್ಟೆಲ್ ಹಿಂಭಾಗದಲ್ಲಿ ಕಸದ ರಾಶಿಗೆ ಬೆಂಕಿ ಹಚ್ಚುವ ವೇಳೆ ಘಟನೆ ನಡೆದಿದ್ದು, ನಾಲ್ಕನೇ ತರಗತಿ ವಿದ್ಯಾರ್ಥಿಗಳಾದ ಶ್ರೀನಿವಾಸ, ಅಮರೇಶ, 5ನೇ ತರಗತಿಯ ಮನೋಜ್ ಮತ್ತು ವಿನೋದ್ ಗಾಯಗೊಂಡಿದ್ದಾರೆ.

ಮಾಹಿತಿ ತಿಳಿದ ವಾರ್ಡನ್ ನಾಲ್ವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಬಂದ ಬಡ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಇವರ ಬಗ್ಗೆ ಇಲಾಖೆ ನಿರ್ಲಕ್ಷ ತೋರಿದೆ ಎಂಬ ಆರೋಪ ಕೇಳಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...