BMTC ಬಸ್ ನಲ್ಲಿ ಬೆಂಗಳೂರು ಸಿಟಿ ರೌಂಡ್ಸ್ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜಧಾನಿ ಬೆಂಗಳೂರು ನಗರ ಪ್ರದಕ್ಷಿಣೆ ಹಾಕಲಿದ್ದಾರೆ. ಈಗಾಗಲೇ ಡಿಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು, ಕೆಲ ಶಾಸಕರು, ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಬಿಡಿಎ ಕೇಂದ್ರ ಕಚೇರಿಯಿಂದ ಡಿಸಿಎಂ ಸಿಟಿ ರೌಂಡ್ಸ್ ಆರಂಭವಾಗಿದ್ದು, ಬಿಎಂಟಿಸಿ ವೋಲ್ವೋ ಬಸ್ ನಲ್ಲಿ ತೆರಳಿ ನಗರ ಪರಿಶೀಲನೆ ನಡೆಸಿದ್ದಾರೆ. ರಾಜಕಾಲುವೆ ಒತ್ತುವರಿ, ಕೆರೆ ಪರಿಶೀಲನೆ ನಡೆಸಲಿದ್ದಾರೆ.

ಯಮಲೂರು, ದೊಮ್ಮಲೂರು, ಬೆಳ್ಳಂದೂರು, ಸರ್ಜಾಪುರಕ್ಕೆ ಡಿಸಿಎಂ ಭೇಟಿ ನೀಡಲಿದ್ದಾರೆ. ಮುಂಗಾರು ಆರಂಭ ಹಿನ್ನೆಲೆಯಲ್ಲಿ ಡಿಸಿಎಂ ಸಿಟಿ ರೌಂಡ್ಸ್ ಮಹತ್ವ ಪಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read