ಕೋಲಾರ : ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.
ಕೋಲಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಸುಧಾಕರ್ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬಹಳಷ್ಟು ಗೊಂದಲಗಳಿದೆ. ಯಾರನ್ನೋ ಮೆಚ್ಚಿಸಲು ಇದನ್ನು ಮಾಡಿಕೊಂಡಿದ್ದಾರೆ ಅಷ್ಟೇ, ಇದು ನಮ್ಮ ರಾಜ್ಯಕ್ಕೆ ಅವಶ್ಯಕತೆಯಿಲ್ಲ. ಶೀಘ್ರದಲ್ಲೇ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಈ ಹಿಂದೆ ತರಾತುರಿಯಲ್ಲಿ ಎನ್ ಇ ಪಿ-ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು. ಎನ್ ಇ ಪಿ ಬದಲಾಯಿಸಿ, ಎಸ್ ಇ ಪಿ-ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. 50 ಕಾಲೇಜಿಗೊಂದು ವಿಶ್ವವಿದ್ಯಾಲಯ ಸ್ಥಾಪನೆ ಮಾಡಿ ಮೂಲ ಸೌಲಭ್ಯ ಕಲ್ಪಿಸದೇ ಹೋದರೆ ಏನು ಪ್ರಯೋಜನ..? ಎಂದು ಪ್ರಶ್ನೆ ಮಾಡಿದರು.