alex Certify BIG NEWS: ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿ, ಸಿಎಂಗೆ ಪತ್ರ ಬರೆದ BMTC ನೌಕರ

ಬೆಂಗಳೂರು: ಬಿಎಂಟಿಸಿ ನೌಕರರೊಬ್ಬರು ದಯಾಮರಣ ಕೋರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಬಿಎಂಟಿಸಿ ನೌಕರ ಶಂಬುಲಿಂಗಯ್ಯ ಚಿಕ್ಕಮಠ ಎಂಬುವವರು, ಹೊತ್ತಿನ ಊಟಕ್ಕೂ ಗತಿಯಿಲ್ಲ, ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ನಮ್ಮ ಕುಟುಂಬ ಬೀದಿಗೆ ಬಿದ್ದಿದೆ. ನಾನು ಮುಷ್ಕರದಲ್ಲಿ ಕೂಡ ಭಾಗಿಯಾಗಿಲ್ಲ. ಆದರೂ ಬಿಎಂಟಿಸಿ ಅಧಿಕಾರಿಗಳು ನನ್ನನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಒಂದು ವರ್ಷದಿಂದ ಕೆಲಸವಿಲ್ಲದೇ ಪರದಾಡುತ್ತಿದ್ದೇನೆ ಹಾಗಾಗಿ ನನಗೆ ಹಾಗೂ ನನ್ನ ಪತ್ನಿ, ಮಕ್ಕಳಿಗೆ ದಯಾಮರಣ ನೀಡಿ ಎಂದು ಪತ್ರದಲ್ಲಿ ಬರೆದಿದ್ದಾರೆ.

ಕೆಲಸದ ಬಗ್ಗೆ ಸಾಕಷ್ಟು ಬಾರಿ ಸಾರಿಗೆ ಸಚಿವರಿಗೂ ಮನವಿ ಮಾಡಿದ್ದೇನೆ. ಆದರೂ ನನಗೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ನನಗೆ ದಯಾಮರಣ ನೀಡಿ ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...