alex Certify ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆ ಬೋಟ್ ಮುಳುಗಡೆ: ಮೀನುಗಾರ ನಾಪತ್ತೆ, ಮೂವರ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆ ಬೋಟ್ ಮುಳುಗಡೆ: ಮೀನುಗಾರ ನಾಪತ್ತೆ, ಮೂವರ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಕಾಸರಕೋಡು ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದೆ. ಅವಘಡದಲ್ಲಿ ಮೀನುಗಾರರೊಬ್ಬರು ನಾಪತ್ತೆಯಾಗಿದ್ದು, ಮೂವರನ್ನು ರಕ್ಷಿಸಲಾಗಿದೆ.

30 ವರ್ಷದ ಉದಯ ದಾಮೋದರ ನಾಪತ್ತೆಯಾದ ಮೀನುಗಾರರ ಎಂದು ಹೇಳಲಾಗಿದೆ. ವಿಜಯ್, ಶಂಕರ್, ಕಾಮೇಶ್ವರ ಅವರನ್ನು ರಕ್ಷಿಸಲಾಗಿದೆ. ಹೊನ್ನಾವರದ ಕಾಸರಕೋಡು ಬಳಿಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿ ಇಕೋ ಬೀಚ್ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿದೆ. ಮೂವರು ಈಜಿಕೊಂಡು ದಡದ ಭಾಗಕ್ಕೆ ಬಂದಿದ್ದು, ಅವರನ್ನು ರಕ್ಷಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಸ್ಥಳೀಯರು ನಾಪತ್ತೆಯಾದ ಮೀನುಗಾರ ಉದಯ್ ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Игра для футбольных болельщиков: найдите Только самый умный найдет ошибку на картинке за Загадка, которая запутает каждого: найдите 3 различия за Задача для