alex Certify ಮೈಸೂರು ವಾಣಿಜ್ಯ ತೆರಿಗೆ ಇಲಾಖೆಗೆ ಬಾಂಬ್​ ಬೆದರಿಕೆ ಪತ್ರ…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ವಾಣಿಜ್ಯ ತೆರಿಗೆ ಇಲಾಖೆಗೆ ಬಾಂಬ್​ ಬೆದರಿಕೆ ಪತ್ರ…..!

ಮೈಸೂರಿನ ವಾಣಿಜ್ಯ ತೆರಿಗೆ ಕಚೇರಿಗೆ ಬಾಂಬ್​ ಬೆದರಿಕೆ ಕರೆಯೊಂದು ಬಂದಿದೆ. ಇದರಿಂದ ಭಯಗೊಂಡ ಸಿಬ್ಬಂದಿ ಕಚೇರಿಯಿಂದ ಹೊರಗೆ ಓಡಿ ಬಂದಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್​ ನಿಷ್ಕ್ರಿಯ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ವಾಣಿಜ್ಯ ತೆರಿಗೆ ಜಂಟಿ ಆಯುಕ್ತರಿಗೆ ಪತ್ರದ ಮೂಲಕ ಬಾಂಬ್​ ಬೆದರಿಕೆ ನೀಡಲಾಗಿತ್ತು. ಲಕ್ಷ್ಮೀಪುರಂನಲ್ಲಿರುವ ಆಡಿಟರ್​ ಕಚೇರಿಯ ಗೇಟ್​​ನಲ್ಲಿ ಒಂದು ಪತ್ರವನ್ನು ಇಡಲಾಗಿತ್ತು. ಇದರಲ್ಲಿ ಮಧ್ಯಾಹ್ನ 12 ರಿಂದ 1 ಗಂಟೆಯ ಒಳಗಾಗಿ ಬಾಂಬ್​ ಸ್ಫೋಟವಾಗುವ ಬಗ್ಗೆ ಉಲ್ಲೇಖಿಸಲಾಗಿತ್ತು ಎಂದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಾಂಬ್​ ಬೆದರಿಕೆ ಕರೆ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಅಲರ್ಟ್​ ಆದ ಪೊಲೀಸರು ಕಟ್ಟಡದ ಸುತ್ತ ಬಿಗಿ ಭದ್ರತೆ ಒದಗಿಸಿದ್ದಾರೆ. ಎರಡು ಗಂಟೆಗಿಂತಲೂ ಅಧಿಕ ಸಮಯದಿಂದ ತಪಾಸಣೆ ನಡೆಯುತ್ತಲೇ ಇದೆ. ಕಚೇರಿ ಸಿಬ್ಬಂದಿಯ ಬ್ಯಾಗ್​ಗಳನ್ನೂ ಬಿಡದೇ ತಪಾಸಣೆ ನಡೆಸಲಾಗಿದೆ. ಟೋಯಿಂಗ್​ ವಾಹನದ ಮೂಲಕ ಕಚೇರಿಯ ಸುತ್ತಮುತ್ತ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳನ್ನು ತೆರವು ಮಾಡಲಾಗಿದೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಡಿಸಿಪಿ ಪ್ರದೀಪ್​ ಗುಂಟಿ, ಮೊದಲ ಹಂತದ ತಪಾಸಣೆ ಪ್ರಕ್ರಿಯೆ ಪೂರ್ಣಗೊಂಡಿದೆ. ತಪಾಸಣೆಯಲ್ಲಿ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ. ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್​ ಕರೆ ಎಂದೆನಿಸುತ್ತಿದೆ. ಆದರೂ ಎರಡನೇ ಹಂತದಲ್ಲಿ ಮತ್ತೊಮ್ಮೆ ತಪಾಸಣೆ ನಡೆಸಲಿದ್ದೇವೆ. ಕಟ್ಟಡದ ಎಲ್ಲಾ ಕಡೆಗಳಲ್ಲಿ ತಪಾಸಣೆ ಕಾರ್ಯ ಪೂರ್ಣಗೊಂಡಿದೆ. ಪತ್ರ ಎಲ್ಲಿಂದ ಬಂತು ಎಂಬುವುದರ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...