alex Certify ನಂದಿನಿ ಹಾಲಿನ ದರ ಏರಿಕೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಂದಿನಿ ಹಾಲಿನ ದರ ಏರಿಕೆ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಸಿಎಂ

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್​ ಮನವಿ ಮಾಡಿರುವ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಾಲಿನ ದರ ಏರಿಕೆ ಮಾಡುವಂತೆ ಕೆಎಂಎಫ್​ ಮನವಿ ಮಾಡಿದೆ. ಅವರ ವಿನಂತಿ ನನ್ನ ಗಮನದಲ್ಲಿದೆ. ಈ ಬಗ್ಗೆ ಈ ತಕ್ಷಣಕ್ಕೆ ಯಾವುದೇ ಹೇಳಿಕೆ ನೀಡಲು ಆಗುವುದಿಲ್ಲ. ಮುಂದೆಯೂ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ ಎಂಧ ಹೇಳಿದ್ರು.

ರೈತರ ಆದಾಯ ದ್ವಿಗುಣಗೊಳ್ಳಬೇಕು ಎನ್ನುವುದು ಪ್ರಧಾನಿ ಮೋದಿಯವರ ಕನಸಾಗಿದೆ. ಹೈನುಗಾರಿಕೆಯನ್ನೂ ಗಮನದಲ್ಲಿಟ್ಟುಕೊಂಡು ಪ್ರಧಾನಿ ಈ ಮಾತನ್ನು ಹೇಳಿದ್ದಾರೆ. ಆದರೆ ಎಷ್ಟೋ ವರ್ಷಗಳಿಂದ ಅನ್ನದಾತ ಮಾತ್ರ ಎಲ್ಲಿದ್ದಾನೋ ಅಲ್ಲಿಯೇ ಇದ್ದಾನೆ. ದೇಶದಲ್ಲಿ ಕೃಷಿ ಕ್ಷೇತ್ರ ಅಭಿವೃದ್ಧಿ ಕಂಡಿದೆ. ಆದರೆ ರೈತ ಮಾತ್ರ ಅಭಿವೃದ್ಧಿಯಾಗಿಲ್ಲ ಎಂದು ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ರು.

ಕೆಎಂಎಫ್​ ಅಭಿವೃದ್ಧಿಯಲ್ಲಿ ಯಡಿಯೂರಪ್ಪ ಪಾತ್ರವನ್ನು ಹಾಡಿಹೊಗಳಿದ ಸಿಎಂ ಬೊಮ್ಮಾಯಿ, ಕೆಎಂಎಫ್​ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಹಾಲಿನ ಪುಡಿ ತಯಾರಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರ ಹಾದಿಯಲ್ಲೇ ನಾನು ನಡೆಯುತ್ತೇನೆ. ಕೆಎಂಎಫ್​ ದೇಶದಲ್ಲೇ ಮೊದಲ ಸ್ಥಾನಕ್ಕೆ ಏರಬೇಕು ಎನ್ನುವುದು ನನ್ನ ಆಶಯವಾಗಿದೆ ಎಂದು ಬೊಮ್ಮಾಯಿ ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...