alex Certify ಪೋಷಕರೇ ಇಲ್ನೋಡಿ…! ಐಸ್ ಕ್ರೀಂ ಆಸೆ ತೋರಿಸಿ ಬಾಲಕನ ಕಿಡ್ನಾಪ್, ಹಣಕ್ಕೆ ಬೇಡಿಕೆ: ಅಂತಿಮವಾಗಿ ರಕ್ಷಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಇಲ್ನೋಡಿ…! ಐಸ್ ಕ್ರೀಂ ಆಸೆ ತೋರಿಸಿ ಬಾಲಕನ ಕಿಡ್ನಾಪ್, ಹಣಕ್ಕೆ ಬೇಡಿಕೆ: ಅಂತಿಮವಾಗಿ ರಕ್ಷಿಸಿದ ಪೊಲೀಸರು

ಬೆಂಗಳೂರು: ಬಾಲಕನೊಬ್ಬನಿಗೆ ಐಸ್ ಕ್ರೀಂ ಆಸೆ ತೋರಿಸಿ ಅಪಹರಿಸಿದ ಘಟನೆ ನಡೆದಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನನ್ನು ರಕ್ಷಿಸಿದ್ದಾರೆ.

ಅಪಹರಣಕಾರನನ್ನ ಬಂಧಿಸಿದ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ರಾಜಸ್ಥಾನ ದಂಪತಿಯ 9 ವರ್ಷದ ಪುತ್ರನನ್ನು ರಕ್ಷಿಸಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡತೋಗೂರು ಸಮೀಪ ಘಟನೆ ನಡೆದಿದೆ. ಐಸ್ ಕ್ರೀಂ ಕೊಡಿಸುವ ಆಮಿಷವೊಡ್ಡಿ ನಿನ್ನೆ ಸಂಜೆ ಬಾಲಕನನ್ನು ಅಪಹರಿಸಲಾಗಿತ್ತು. ಮೊಹಮ್ಮದ್ ಜಶಿಮುದ್ದೀನ್ ಶೇಕ್(24) ಎಂಬಾತ ಬಾಲಕನ ಅಪಹರಿಸಿದ್ದಲ್ಲದೇ, ಪೋಷಕರಿಗೆ ಕರೆ ಮಾಡಿ 10 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದ. ಹಣ ಕೊಡದಿದ್ದರೆ ನಿಮ್ಮ ಮಗನನ್ನು ಬಿಡುವುದಿಲ್ಲ ಎಂದು ಹೇಳಿದ್ದ.

ಮಗನ ಅಪಹರಣದ ಬಗ್ಗೆ ಪೋಷಕರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಕಾರ್ ನಲ್ಲಿ ಬಾಲಕನನ್ನು ಕೂರಿಸಿಕೊಂಡು ವೀರಸಂದ್ರ, ಹುಸ್ಕೂರು ಸುತ್ತಮುತ್ತ ಓಡಾಟ ನಡೆಸಿದ್ದ. ಪೊಲೀಸರ ಕಣ್ಣು ತಪ್ಪಿಸಲು ಕಾರ್ ನಲ್ಲಿ ಓಡಾಡುತ್ತಿದ್ದ. ಅಂತಿಮವಾಗಿ ಜಶೀಮುದ್ದೀನ್ ಶೇಕ್ ನನ್ನು ಬಂಧಿಸಿ ಬಾಲಕನನ್ನು ರಕ್ಷಿಸಲಾಗಿದೆ. ಬಾಲಕನನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...