alex Certify ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಉಚಿತ ಪಡಿತರ, ಚಿಕಿತ್ಸೆ, ಸಾಲ ಸೇರಿ ಸರ್ಕಾರಿ ಸೌಲಭ್ಯ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಉಚಿತ ಪಡಿತರ, ಚಿಕಿತ್ಸೆ, ಸಾಲ ಸೇರಿ ಸರ್ಕಾರಿ ಸೌಲಭ್ಯ ಕಡಿತ

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಆಹಾರ ಇಲಾಖೆ ಪತ್ತೆ ಮಾಡಿ ರದ್ದುಪಡಿಸುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದುಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ದಂಡ ವಿಧಿಸಲಾಗುತ್ತಿದೆ.

ಕಾರ್ಡ್ ರದ್ದಾದದಲ್ಲಿ ಈ ಕಾರ್ಡ್ ಮೂಲಕ ಪಡೆದುಕೊಳ್ಳುತ್ತಿದ್ದ ಸರ್ಕಾರಿ ಸೌಲಭ್ಯಗಳು ಕೂಡ ಕಡಿತವಾಗಲಿವೆ. ಉಚಿತ ರೇಷನ್, ಆರೋಗ್ಯ ಸೇವೆ, ಆರ್‌ಟಿಇ ಸೀಟು, ಸರ್ಕಾರಿ ವಸತಿ ಸೌಲಭ್ಯ ಮೊದಲಾದ ಸೇವೆಗಳು ರದ್ದಾಗುತ್ತವೆ.

ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಮನೆ ಹೊಂದಿದವರು, ವಾರ್ಷಿಕ 1.20 ಲಕ್ಷ ರೂ. ಗಿಂತ ಹೆಚ್ಚು ಆದಾಯ ಇರುವವರು, ಜೀವನೋಪಾಯಕ್ಕಾಗಿ ಸ್ವಂತ ವಾಣಿಜ್ಯ ವಾಹನ ಹೊಂದಿದವರು, ಕಾರು ಹೊಂದಿದವರು, ಜಿ.ಎಸ್.ಟಿ. ಆದಾಯ ತೆರಿಗೆ ಪಾವತಿಸುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದವರು ಸರ್ಕಾರಿ ಸೌಲಭ್ಯ ಪಡೆಯುವಂತಿಲ್ಲ.

ಬಿಪಿಎಲ್, ಅಂತ್ಯೋದಯ ಕಾರ್ಡ್ ಇರುವವರಿಗೆ ವಾರ್ಷಿಕ 5 ಲಕ್ಷ ರೂ. ಉಚಿತ ಚಿಕಿತ್ಸೆ, ವಿವಿಧ ವಸತಿ ಯೋಜನೆಗಳಲ್ಲಿ ಮನೆ ಸೌಲಭ್ಯ, ಬಡ್ಡಿ ರಹಿತ ಸಾಲ, ಗಂಗಾ ಕಲ್ಯಾಣ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆ, ಸಾಲ ಸೌಲಭ್ಯ ಸೇರಿದಂತೆ ವಿವಿಧ ಕಲ್ಯಾಣ ಯೋಜನೆ ಸೌಲಭ್ಯ ನೀಡಲಾಗುವುದು. ಕಾರ್ಡ್ ರದ್ದಾದಲ್ಲಿ ಇವೆಲ್ಲವೂ ಸ್ಥಗಿತವಾಗಲಿವೆ. ಆಹಾರ ಇಲಾಖೆ ಅಧಿಕಾರಿಗಳು ಹೀಗೆ ಸುಳ್ಳು ಮಾಹಿತಿ ನೀಡಿದವರನ್ನು ಪತ್ತೆ ಮಾಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳನ್ನು ರದ್ದುಪಡಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...