alex Certify ಬಯಲಾಯ್ತು ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಯಲಾಯ್ತು ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣ

ಕೊಡಗು ಜಿಲ್ಲೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ವರದಿ ಸಲ್ಲಿಸಿದ್ದಾರೆ.

ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಇಂಗುಗುಂಡಿ ನಿರ್ಮಾಣ ಮಾಡಿದ್ದು ಅಂತರ್ಜಲ ಹೆಚ್ಚಾಗಿ ಅತಿಯಾದ ಮಳೆಯಿಂದ ದುರಂತ ಸಂಭವಿಸಿದೆ. ರಸ್ತೆ ಕಾಮಗಾರಿಯಿಂದ ಬೆಟ್ಟದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಹೇಳಲಾಗಿದೆ.

2017 ರಿಂದಲೇ ಬೆಟ್ಟದಲ್ಲಿ ದುರಂತ ಸಂಭವಿಸುವ ಮುನ್ಸೂಚನೆ ನೀಡಲಾಗಿದೆ. ಬ್ರಹ್ಮಗಿರಿ ಬೆಟ್ಟದ ಸ್ವರೂಪಕ್ಕೆ ಧಕ್ಕೆ ಆಗಿದ್ದರಿಂದ ಅನಾಹುತವಾಗಿದೆ. ತಲಕಾವೇರಿಯಲ್ಲಿ ಮತ್ತೆ ಸಮಸ್ಯೆಯಾಗುವ ಬಗ್ಗೆ ಸರ್ಕಾರಕ್ಕೆ ಸಲ್ಲಿಸಿದ ವಿಜ್ಞಾನಿಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆಗಸ್ಟ್ 5 ರಂದು ಮಧ್ಯರಾತ್ರಿ ಬ್ರಹ್ಮಗಿರಿ ಬೆಟ್ಟ ಕುಸಿದು ಬೆಟ್ಟದ ತಪ್ಪಲಿನಲ್ಲಿದ್ದ ಅರ್ಚಕರ ಕುಟುಂಬದ 5 ಮಂದಿ ಭೂಸಮಾಧಿಯಾಗಿದ್ದರು. ಆಗಸ್ಟ್ 14 ಮತ್ತು 15 ರಂದು ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಮೇಲ್ನೋಟಕ್ಕೆ ಮಾನವನ ಹಸ್ತಕ್ಷೇಪ ಕಾರಣವನ್ನು ನೀಡಿದ್ದು, ಬಳಿಕ 16 ಪುಟಗಳ ವರದಿಯನ್ನು ಅಧಿಕಾರಿಗಳ ತಂಡ ಸರ್ಕಾರಕ್ಕೆ ಸಲ್ಲಿಸಿದೆ. ಈ ವರದಿ ಆಧರಿಸಿ ಹೈಕೋರ್ಟ್ ಗೆ ಹೋಗಲು ಪರಿಸರವಾದಿಗಳು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...