alex Certify BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದು ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಬೆಳಗಾವಿ ಜಿಲ್ಲೆ ಮುರಗೋಡ ಬಳಿಯ ಮುಗಳಿಹಾಳದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಯುವಕ ಅರ್ಜುನ್ ಗೌಡ ಎಂಬಾತನನ್ನು ಚಾಕು ಇರಿದು ಹತ್ಯೆ ಮಾಡಲಾಗಿತ್ತು. ಯುವಕ ಸಾವನ್ನಪ್ಪುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು.

ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉದಯ ಭಂದ್ರೊಳಿ ( 21) , ಸುಭಾಸ ಸೊಲನ್ನವರ್ ( 21) , ವಿಠ್ಠಲ ಮೀಶಿ ( 20) ಹಾಗೂ ಇನ್ನೋರ್ವ ಬಾಲಾರೋಪಿ ಸೇರಿ ನಾಲ್ವರು ಬಂಧಿತರು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...