alex Certify BREAKING: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಚಿಕ್ಕಮಗಳೂರು: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯರಿಗೆ 2000 ರೂಪಾಯಿ ಮಾಸಿಕ ಸಹಾಯಧನ ಯೋಜನೆ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಕೊಂಚ ವಿಳಂಬವಾಗುತ್ತಿದೆ. ಯೋಜನೆಯಲ್ಲಿ ಕೆಲವೊಂದು ಬದಲಾವಣೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಿರುವುದರಿಂದ ಹಾಗೂ ಗೃಹಲಕ್ಷ್ಮಿ ಯೋಜನೆಗಾಗಿಯೇ ಪ್ರತ್ಯೇಕ ಆಪ್ ಸಿದ್ಧಪಡಿಸಲು ಹೇಳಿದ್ದೇವೆ. ಹಾಗಾಗಿ ಅರ್ಜಿ ಸಲ್ಲಿಕೆಗೆ ಸ್ವಲ್ಪ ವಿಳಂಬವಾಗುತ್ತಿದೆ ಎಂದರು.

ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ಸರ್ಕಾರದ ಉದ್ದೇಶ. ಆಗಸ್ಟ್ 17 ಅಥವಾ 18ಕ್ಕೆ ಫಲಾನುಭವಿಗಳ ಖಾತೆಗೆ ಖಂಡಿತವಾಗಿ ಯೋಜನೆಯ ಹಣವನ್ನು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Jak se Jak teplota vody Proč semena papriky neklíčí a jak Vědci objevili nejzdravější sacharidy Vepřový jazyk: Tajemství přípravy lahodné lahůdky Odborník na výživu přináší