alex Certify BREAKING: ನೀರಿನ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೀರಿನ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವು

ಬೆಂಗಳೂರು: ನೀರಿನ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಿ.ಕೆ.ಪಾಳ್ಯದಲ್ಲಿ ನಡೆದಿದೆ.

4 ವರ್ಷದ ಭುವನ್ ಮೃತ ಬಾಲಕ. ಭುವನ್ ತನ್ನ ಅಣ್ಣನೊಂದಿಗೆ ಐಸ್ ಕ್ರೀಮ್ ತರಲೆಂದು ಬೇಕರಿಗೆ ಬಂದಿದ್ದ. ಬೇಕರಿಯಿಂದ ವಾಪಸ್ ತೆರಳುತ್ತಿದ್ದಾಗ ಬಾಲಕನ ಮೇಲೆ ನೀರಿನ ಟ್ರ್ಯಾಕ್ಟರ್ ಹರಿದು ಹೋಗಿದೆ. ಅಪಘಾತದ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಗಂಭೀರವಾಗಿ ಗಯಗೊಂಡಿದ್ದ ಭುವನ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಟ್ರ್ಯಾಕ್ಟರ್ ಚಾಲಕನಿಂದ ಈ ದುರತ ಸಂಭವಿಸಿದೆ. ಮಗುವನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...