alex Certify BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭೀಕರ ಅಪಘಾತ: ಬಸ್ ಹಾಗೂ ಲಾರಿ ನಡುವೆ ಸಿಲುಕಿ ಮಹಿಳೆ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಬಳಿ ನಡೆದಿದೆ.

ಅಪಘಾತದಲ್ಲಿ ಬಸ್ ಹಾಗೂ ಲಾರಿ ನಡುವೆ ಬೈಕ್ ನಲ್ಲಿದ್ದ ಮಹಿಳೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಮೃತ ಮಹಿಳೆ ಅನುಷಾ ಎಂದು ಗುರುತಿಸಲಾಗಿದೆ. ಮಹಿಳೆ ತನ್ನ ತಾಯಿ ಹಾಗೂ 7 ವರ್ಷದ ಮಗನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ನಾಯಂಡಹಳ್ಳಿ ಜಂಕ್ಷನ್ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮಹಿಳೆಯ ತಲೆಯಮೇಲೆ ಲಾರಿಯ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮಹಿಳೆಯ ಮಗನ ತಲೆ ಹಾಗೂ ಕಾಲಿಗೆ ಗಾಯವಾಗಿದೆ. ಮಹಿಳೆಯ ತಾಯಿ ಸ್ಥಿತಿಯೂ ಗಂಭೀರವಾಗಿದೆ.

ಘಟನಾ ಸ್ಥಳದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಲಾರಿ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...