alex Certify BREAKING: ಮಣಿಪುರದ ಸೇನಾ ಶಿಬಿರದಲ್ಲಿ ಭೀಕರ ಭೂಕುಸಿತ, 6 ಮಂದಿ ದುರ್ಮರಣ, 50ಕ್ಕೂ ಹೆಚ್ಚು ಜನರು ನಾಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮಣಿಪುರದ ಸೇನಾ ಶಿಬಿರದಲ್ಲಿ ಭೀಕರ ಭೂಕುಸಿತ, 6 ಮಂದಿ ದುರ್ಮರಣ, 50ಕ್ಕೂ ಹೆಚ್ಚು ಜನರು ನಾಪತ್ತೆ

ಮಣಿಪುರದ ಸೇನಾ ನೆಲೆಯೊಂದರಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ದುರ್ಘಟನೆಯಲ್ಲಿ ಹಲವರು ಮೃತಪಟ್ಟಿದ್ದು, ಈಗಾಗ್ಲೇ 6 ಶವಗಳನ್ನು ಹೊರತೆಗೆಯಲಾಗಿದೆ. 13 ಜನರನ್ನು ರಕ್ಷಣೆ ಮಾಡಲಾಗಿದೆ. 50ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಭಾರತೀಯ ಸೇನೆಯ 107 ಪ್ರಾದೇಶಿಕ ಸೇನಾ ಶಿಬಿರದಲ್ಲಿ ಈ ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಬಗ್ಗೆ ಚರ್ಚಿಸಲು ಮಣಿಪುರ ಸಿಎಂ ಬಿರೇನ್‌ ಸಿಂಗ್‌ ತುರ್ತು ಸಭೆ ಕರೆದಿದ್ದಾರೆ. ಮಣಿಪುರದ ನೋನಿ ಜಿಲ್ಲೆಯಲ್ಲಿರೋ ತುಪುಲ್‌ ರೈಲ್ವೆ ನಿಲ್ದಾಣದ ಬಳಿ ಈ ಸೇನಾ ಶಿಬಿರವಿದೆ.

ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ ನೋನಿಯಲ್ಲಿರೋ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಭೂಕುಸಿತದಿಂದಾಗಿ ಹಲವೆಡೆ ರಸ್ತೆ ಸಂಚಾರಕ್ಕೂ ಅಡ್ಡಿಯಾಗಿದೆ. ಪ್ರವಾಸಿಗರು ಈ ಮಾರ್ಗದಲ್ಲಿ ಸಂಚಾರ ಮಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ದುರ್ಘಟನೆ ಸಂಭವಿಸಿರುವ ಸ್ಥಳಕ್ಕೆ ಸಮೀಪದಲ್ಲೇ ನದಿ ಇದ್ದು, ಆ ಸ್ಥಳಕ್ಕೆ ಮಕ್ಕಳಿಗೆ ತೆರಳಲು ಅವಕಾಶ ಕೊಡದಂತೆ ಸೂಚಿಸಲಾಗಿದೆ. ಭೂಕುಸಿತದಿಂದಾದ ಅವಶೇಷಗಳಡಿ ಸಿಕ್ಕಿಹಾಕಿಕೊಂಡವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ. ಆಂಬ್ಯುಲೆನ್ಸ್‌ ಹಾಗೂ ವೈದ್ಯರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...