alex Certify BREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜಕಾರಣದಲ್ಲಿ ನೆಮ್ಮದಿಯೆ ಇಲ್ಲದಾಗಿದೆ; ಮತ್ತೆ ರಾಜಕೀಯ ನಿವೃತ್ತಿ ಮಾತನಾಡಿದ ಸಂಸದ ಡಿ.ಕೆ. ಸುರೇಶ್

ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತೆ ರಾಜಕೀಯ ನಿವೃತ್ತಿಯ ಬಗ್ಗೆ ಪುನರುಚ್ಛಾರ ಮಾಡಿದ್ದಾರೆ. ರಾಜಕಾರಣದಲ್ಲಿ ನೆಮ್ಮದಿ ಅನ್ನುವುದೇ ಇಲ್ಲದಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, ನನಗೆ ರಾಜಕಾರಣ ಬೇಡವೆನಿಸಿದೆ. ಹೀಗಾಗಿ ಚುನಾವಣಾ ರಾಜಕೀಯದಿಂದ ದೂರ ಉಳಿಯುವೆ. ರಾಜಕೀಯದಲ್ಲಿ ನೆಮ್ಮದಿ ಅನ್ನೋದೆ ಇಲ್ಲದಾಗಿದೆ. ಹೊರಗೆ ಹೋದರೆ ಜನರ ಬಳಿಯೂ ನೆಮ್ಮದಿ ಇಲ್ಲ, ಇಲ್ಲಿ ಜೊತೆ ಇರುವವರ ಬಳಿಯೂ ನೆಮ್ಮದಿ ಇಲ್ಲ. ವಿಶ್ರಾಂತಿ ಬೇಕಾಗಿದೆ… ಆದ್ದರಿಂದ ದೂರ ಉಳಿಯುವೆ ಎಂದು ಹೇಳಿದ್ದಾರೆ.

ಈ ಹಿಂದೆಯೂ ರಾಜಕೀಯದಿಂದ ದೂರ ಉಳಿಯುವ ಮಾತುಗಳನ್ನಾಡಿದ್ದ ಡಿ.ಕೆ. ಸುರೇಶ್, ಈಗ ಮತ್ತೊಮ್ಮೆ ರಾಜಕೀಯ ನಿವೃತ್ತಿ ಮಾತುಗಳನ್ನಾಡಿದ್ದು, ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲವೇ? ಎಂಬ ಪ್ರಶ್ನೆ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...