alex Certify BREAKING: ವಿಪಕ್ಷಗಳ ಬಹಿಷ್ಕಾರದ ನಡುವೆಯೂ ನಡೆದ ಸದನ ಕಲಾಪ ಸಮಿತಿ ಸಭೆ; ಮಹತ್ವದ ವಿಧೇಯಕಗಳ ಮಂಡನೆಗೆ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಪಕ್ಷಗಳ ಬಹಿಷ್ಕಾರದ ನಡುವೆಯೂ ನಡೆದ ಸದನ ಕಲಾಪ ಸಮಿತಿ ಸಭೆ; ಮಹತ್ವದ ವಿಧೇಯಕಗಳ ಮಂಡನೆಗೆ ಚರ್ಚೆ


ಬೆಂಗಳೂರು: ಸದನ ಕಲಾಪ ಸಲಹಾ ಸಮಿತಿ ಸಭೆಯನ್ನು ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು  ಬಹಿಷ್ಕರಿಸಿದ್ದು, ವಿಪಕ್ಷ ನಾಯಕರ ಬಹಿಷ್ಕಾರದ ನಡುವೆಯೂ ಸಭೆ ನಡೆಸಲಾಗಿದೆ.

ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಬಹಿಷ್ಕಾರದ ನಡುವೆಯೂ ಸದನ ಕಲಾಪ ಸಲಹಾ ಸಮಿತಿ ಸಭೆ ನಡೆಸಲಾಗಿದ್ದು, ಹಲವು ಮಹತ್ವದ ವಿಧೇಯಕಗಳ ಮಂಡನೆಗೆ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಮುಖವಾಗಿ ಕರ್ನಾಟಕ ವಿಧಾನ ಮಂಡಲ ತಿದ್ದುಪಡಿ ವಿಧೇಯಕ, ಅಗ್ನಿಶಾಮಕ ದಳ ತಿದ್ದುಪಡಿ ವಿಧೇಯಕ, ಧಾರ್ಮಿಕ ಸ್ವಾತಂತ್ರ್ಯ ಹಕ್ಕು (ಮತಾಂತರ ನಿಷೇಧ ಕಾಯ್ದೆ ) ತಿದ್ದುಪಡಿ ವಿಧೇಯಕ, ಎಪಿಎಂಸಿ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕ ಸೇರಿದಂತೆ ಅನೇಕ ವಿಧೇಯಕಗಳ ಮಂಡನೆ ಬಗ್ಗೆ ಚರ್ಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...