alex Certify BREAKING: ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಪ್ರವಾಸಿಗ; ನೋಡ ನೋಡುತ್ತಲೇ ಕಣ್ಮರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋದ ಪ್ರವಾಸಿಗ; ನೋಡ ನೋಡುತ್ತಲೇ ಕಣ್ಮರೆ

ಮುರುಡೇಶ್ವರ: ಬಿಪರ್ ಜಾಯ್ ಚಂಡಮಾರುತದ ಆರ್ಭಟಕ್ಕೆ ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ದುರಂತವೊಂದು ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಪ್ರವಾಸಿಗನೊಬ್ಬ ಸಮುದ್ರದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಕಲಘಟಗಿಯಿಂದ 22 ಜನ ಪ್ರವಾಸಿಗರು ಮುರುಡೇಶ್ವರಕ್ಕೆ ಬಂದಿದ್ದರು. ಚಂಡಮಾರುತ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ್ದರೂ ಪ್ರವಾಸಿಗರು ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ಏಕಾಏಕಿ ಸಮುದ್ರದ ಅಲೆಗಳು ಹೆಚ್ಚತೊಡಗಿವೆ. ಅಲೆಗಳ ಹೊಡೆತಕ್ಕೆ ಸಿಲುಕಿದ ಓರ್ವ ನೋಡ ನೋಡುತ್ತಿದ್ದಂತೆ ಅಲೆಗಳ ನಡುವೆ ಸಿಲುಕಿ ಕೊಚ್ಚಿ ಹೋಗಿದ್ದು, ಕಣ್ಮರೆಯಾಗಿದ್ದಾನೆ. ಅಲೆಗಳ ಹೊಡೆತಕ್ಕೆ ಸಿಲುಕಿದ್ದ ಇನ್ನಿಬ್ಬರನ್ನು ರಕ್ಷಿಸಲಾಗಿದೆ.

ಸಂತೋಷ್ ಎಂಬ ಪ್ರವಾಸಿಗ ಕಣ್ಮರೆಯಾಗಿದ್ದು, ಹಸನ್ ಮಜ್ಜಗಿ ಗೌಡರ್ ಹಾಗೂ ಸಂಜೀವ್ ಹೆಬ್ಬಳ್ಳಿ ಎಂಬ ಇಬ್ಬರನ್ನು ರಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...