
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ ಅಪಘಾತ ಸಂಭವಿಸಿದ್ದು, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಕುಮಾರಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಮಾರ್ಗಮಧ್ಯ ಮೂತ್ರ ವಿಸರ್ಜನೆಗಾಗಿ ಕಾರ್ ನಿಂದ ಇಳಿಯುವಾಗ ಅವರಿಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅವರ ತಲೆ, ಕೈಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು, ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಎತ್ತಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.