ಬೆಂಗಳೂರು : ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಸಂಜೆ 7 ಗಂಟೆಗೆ ನಡೆಯುವ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕ ಮಂಡನೆಗೆ ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆಯಿದೆ. ಉಪಚುನಾವಣೆ ವೇಳೆ ಇದನ್ನು ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸಿತ್ತು, ಆದರೆ ವ್ಯಾಪಕ ವಿರೋಧದ ಹಿನ್ನೆಲೆ ಇದನ್ನು ಸರ್ಕಾರ ಮುಂದೂಡಿತ್ತು.
ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.