alex Certify BREAKING : ಬಿಜೆಪಿ ವಿರುದ್ಧ 40 % ಕಮಿಷನ್ ಆರೋಪ : ರಾಹುಲ್ ಗಾಂಧಿಗೆ ಜಾಮೀನು ಮಂಜೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ವಿರುದ್ಧ 40 % ಕಮಿಷನ್ ಆರೋಪ : ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಬೆಂಗಳೂರು : ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಆಗಿದೆ.

ಬಿಜೆಪಿ ವಿರುದ್ಧ 40 % ಕಮಿಷನ್  ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ರಾಹುಲ್ ಗಾಂಧಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಜಾಮೀನು ಬಾಂಡ್ ಗೆ ರಾಹುಲ್ ಗಾಂಧಿ ಸಹಿ ಹಾಕಿದ್ದು, ಕೋರ್ಟ್ ಜೂ.30 ಕ್ಕೆ ವಿಚಾರಣೆ ಮುಂದೂಡಿದೆ. ಡಿ.ಕೆ ಸುರೇಶ್ ಅವರು ಶ್ಯೂರಿಟಿ ಬಾಂಡ್ ಗೆ ಸಹಿ ಹಾಕಿದ್ದಾರೆ.

ಕಳೆದ ವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೋರ್ಟ್ ಗೆ ಹಾಜರಾಗಿದ್ದರು. ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಆದರೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿರಲಿಲ್ಲ, ಈ ಹಿನ್ನೆಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ರಾಹುಲ್ ಗಾಂಧಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಜೂನ್ 7 ರಂದು ತಪ್ಪದೇ ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಿತ್ತು.
ಚುನಾವಣೆ ವೇಳೆ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ, ಭ್ರಷ್ಟಾಚಾರದ ದರಪಟ್ಟಿಯ ಜಾಹೀರಾತನ್ನು ಕಾಂಗ್ರೆಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಮಾನನಷ್ಟ ಮೊಕದ್ದಮೆ ಸಲ್ಲಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...