alex Certify BREAKING : ಬೆಳಗಾವಿಯ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಸಜೀವ ದಹನ, ಹಲವರಿಗೆ ಗಾಯ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಓರ್ವ ಸಜೀವ ದಹನ, ಹಲವರಿಗೆ ಗಾಯ.!

ಬೆಳಗಾವಿ : ಬೆಳಗಾವಿಯ ಫ್ಯಾಕ್ಟರಿಯೊಂದರಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಓರ್ವ ಕಾರ್ಮಿಕ ಸಜೀವ ದಹನವಾಗಿ , ಹಲವಾರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿಯ ನಾವಗೆಯ ಸ್ನೇಹಂ ಸೆಲೋ ಟೇಪ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ನೇಹಂ ಟೇಪ್ ಮ್ಯಾನುಫ್ಯಾಕ್ಚರಿಂಗ್ ಕಾರ್ಖಾನೆಯ ಲಿಫ್ಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಇಡೀ ಕಾರ್ಖಾನೆಗೆ ಆವರಿಸಿದೆ. ಪರಿಣಾಮ ಲಿಫ್ಟ್ ನಲ್ಲಿ ಸಿಲುಕಿದ್ದ ಕಾರ್ಮಿಕ ಯಲ್ಲಪ್ಪ ಎಂಬುವವರು ಸಜೀವವಾಗಿ ದಹನವಾಗಿದ್ದಾರೆ. ಸತತ 5 ಗಂಟೆ ಕಾರ್ಯಾಚರಣೆ ನಡೆಸಿ ಫ್ಯಾಕ್ಟರಿಯ ಗೋಡೆ ಒಡೆದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಫ್ಯಾಕ್ಟರಿಯಲ್ಲಿ 150 ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದು, ಸದ್ಯ ಅದೃಷ್ಟವಶಾತ್ ಪಾರಾಗಿದ್ದಾರೆ. ಆದರೆ ಓರ್ವ ಕಾರ್ಮಿಕ ಯಲ್ಲಪ್ಪ ಬೆಂಕಿಯಲ್ಲಿ ಬೆಂದು ಸಜೀವ ದಹನವಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...