alex Certify BREAKING : ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಪ್ರಕರಣ : ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಾಜಿನಗರದ ಮಸೀದಿಗೆ ಹುಸಿ ಬಾಂಬ್ ಕರೆ ಪ್ರಕರಣ : ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಶಿವಾಜಿನಗರದ ಮಸೀದಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಶಿವಾಜಿನಗರದ ಪೊಲೀಸರು ಬಂಧಿಸಿದ್ದಾರೆ.

ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಮಹಾರಾಷ್ಟ್ರ ಮೂಲದ ಸೈಯದ್ ಮಹಮ್ಮದ್ ಅನ್ವರ್ ನನ್ನು ಶಿವಾಜಿನಗರ ಪೊಲೀಸರು ಬಂಧಿಸಿದ್ದಾರೆ.  ಅನ್ವರ್ ಮಸೀದಿಯಲ್ಲಿ ಮಲಗಲು ಬಿಟ್ಟಿಲ್ಲ ಅಂತಾ ಮಸೀದಿ ಸಿಬ್ಬಂದಿ ಮೇಲಿನ ಕೋಪಕ್ಕೆ ಕಟ್ರೋಲ್ ನಂಬರ್ 112ಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದನು.

ಜುಲೈ 4ರಂದು ಬಂಗಳೂರಿಗೆ ಬಂದಿದ್ದ ಅನ್ವರ್‌ ಶಿವಾಜಿನಗರದ ರೆಸೆಲ್ ಮಾರ್ಕೆಟ್ ಹಿಂದಿರುವ ಆಜಾಂ ಮಸೀದಿಗೆ ಬಂದಿದ್ದನು. ರಾತ್ರಿ ಉಳಿದುಕೊಳ್ಳಲು ಮುಂದಾಗಿದ್ದ. ಆದರೆ ಮಸೀದಿ ಸಿಬ್ಬಂದಿ ಆತನಿಗೆ ಉಳಿದುಕೊಳ್ಳಲು ಅವಕಾಶ ಕೊಟ್ಟಿರಲಿಲ್ಲ.ಇದರಿಂದ ಕೋಪಗೊಂಡಿದ್ದ ಅನ್ವರ್ ಮಸೀದಿಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಿದ್ದನು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...