alex Certify BREAKING : ನಟ ದರ್ಶನ್ ಗೆ ರಾಜಾತಿಥ್ಯ : ಸಂಪೂರ್ಣ ವರದಿ ನೀಡುವಂತೆ ಡಿಜಿ-ಐಜಿಪಿ ಗೆ ‘CM ಸಿದ್ದರಾಮಯ್ಯ’ ಸೂಚನೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್ ಗೆ ರಾಜಾತಿಥ್ಯ : ಸಂಪೂರ್ಣ ವರದಿ ನೀಡುವಂತೆ ಡಿಜಿ-ಐಜಿಪಿ ಗೆ ‘CM ಸಿದ್ದರಾಮಯ್ಯ’ ಸೂಚನೆ..!

ಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ನೀಡಿರುವ ರಾಜಾತಿಥ್ಯ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಡಿಜಿ ಐಜಿಪಿ ಅಲೋಕ್  ಮೋಹನ್  ಗೆ ಸೂಚನೆ ನೀಡಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಡಿಜಿ ಐಜಿಪಿ ಅಲೋಕ್   ಮೋಹನ್ ಸಿಎಂಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಸಿಎಂ ಈ ಕೂಡಲೇ ಜೈಲಾಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ಹಾಗೂ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಡಿಜಿ ಐಜಿಪಿ ಅಲೋಕ್ ಕುಮಾರ್ ಗೆ ಸೂಚನೆ ನೀಡಿದ್ದಾರೆ.  ನಿಯಮ ಉಲ್ಲಂಘಿಸಿದ ಜೈಲಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯಸೂಚನೆ ನೀಡಿದ್ದಾರೆ.

ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಡಿಜಿ-ಐಜಿಪಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ, ನಿಯಮ ಉಲ್ಲಂಘನೆ ಮಾಡಿ ನಡೆದುಕೊಂಡ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಿ, ಶಿಸ್ತುಕ್ರಮ ಕೈಗೊಳ್ಳಿ ಎಂದು ಸೂಚಿಸಿದರು. ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...