alex Certify BREAKING : ಜೈಲಿನಲ್ಲಿ ನಟ ದರ್ಶನ್ ಭೇಟಿ ವಿಚಾರ : ACP ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಜೈಲಿನಲ್ಲಿ ನಟ ದರ್ಶನ್ ಭೇಟಿ ವಿಚಾರ : ACP ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ನಟ ಚಿಕ್ಕಣ್ಣ..!

ಬೆಂಗಳೂರು : ಜೈಲಿನಲ್ಲಿ ನಟ ದರ್ಶನ್ ಭೇಟಿಯಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ.

ವಿಜಯನಗರದ   ಬಸವೇಶ್ವರ ನಗರ ಠಾಣೆಯಲ್ಲಿರುವ  ಎಸಿಪಿ ಕಚೇರಿಗೆ ಬಂದ ನಟ ಚಿಕ್ಕಣ್ಣ ವಿಚಾರಣೆಗೆ ಹಾಜರಾಗಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ ಗೆ ಸಂಕಷ್ಟ ಎದುರಾಗಿದ್ದು, ಅವರನ್ನು ವಿಚಾರಣೆಗೆ ಬರುವಂತೆ ಪೊಲೀಸರು ಬುಲಾವ್ ನೀಡಿದ್ದರು.

ದರ್ಶನ್ ಮತ್ತು ಗ್ಯಾಂಗ್ ವಿರುದ್ಧ ಪ್ರಮುಖ ಸಾಕ್ಷಿಯಾಗಿರುವ ಚಿಕ್ಕಣ್ಣ ಸೆಕ್ಷನ್ ಸಿ ಆರ್ ಸಿ ಪಿ 164 ರ ಅಡಿಯಲ್ಲಿ ಜಡ್ಜ್ ಎದುರು ತಮ್ಮ ಹೇಳಿಕೆ ದಾಖಲಿಸಿದ್ದರು. ಇದಾದ ಬಳಿಕ ಕೊಲೆ ಆರೋಪಿ ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ತನಿಖಾ ಹಂತದಲ್ಲಿರುವಾಗಲೇ ನಟ ಚಿಕ್ಕಣ್ಣ ನಟ ದರ್ಶನ್ ನ್ನು ಭೇಟಿ ಮಾಡಿದ್ದು, ಮತ್ತೆ ಪೊಲೀಸರು ಚಿಕ್ಕಣ್ಣಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಅಭಿಷೇಕ್ ಅಂಬರೀಷ್, ಧನ್ವೀರ್, ಚಿಕ್ಕಣ್ಣ ಭೇಟಿಯಾಗಿದ್ದರು.ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ನಟ ದರ್ಶನ್ ಅವರನ್ನು ನೋಡಲು ಅಭಿಷೇಕ್ ಅಂಬರೀಷ್ ಬಂದಿದ್ದರು. ಅಭಿಷೇಕ್ ಅಂಬರೀಷ್ ಜೊತೆ ಚಿಕ್ಕಣ್ಣ, ಧನ್ವೀರ್ ಕೂಡ ಬಂದಿದ್ದರು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...