alex Certify BREAKING : 11 ಸಾವಿರ ‘ಪೌರ ಕಾರ್ಮಿಕರ ನೇಮಕಾತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 11 ಸಾವಿರ ‘ಪೌರ ಕಾರ್ಮಿಕರ ನೇಮಕಾತಿ’ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಈಗಾಗಲೇ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮುಂದುವರೆದು ಪ್ರಮುಖ ಅಂಶಗಳನ್ನು ಮಾರ್ಪಾಡು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ಯಾವುದೇ ವರ್ಗದ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಏನಿದು ಆದೇಶ..?

11,307 ಸಂಖ್ಯಾತಿರಿಕ್ತ ಹುದ್ದೆಗಳಿಗೆ ಪೌರಕಾರ್ಮಿಕರುಗಳ ನೇಮಕಾತಿ ಸಮಯದಲ್ಲಿ ಅರ್ಹ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ಯಾವುದೇ ವರ್ಗದ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಬಹುದು.ಈ ಸೇರ್ಪಡೆ ಆದೇಶವನ್ನು ದಿನಾಂಕ:22-02-2024 ರಂದು ನಡೆದ ಸಚಿವ ಸಂಪುಟದ ಸಭೆ ಸಂಖ್ಯೆ: 06 ಪ್ರಕರಣ ಸಂಖ್ಯೆ:ಸಿ.163/2024ರ ತೀರ್ಮಾನದಂತೆ ಹೊರಡಿಸಿದೆ ಎಂದು ಆದೇಶ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...