alex Certify BREAKING : ಮೈಸೂರಿನಲ್ಲಿ ಮತ್ತೊಂದು ದುರಂತ : ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೈಸೂರಿನಲ್ಲಿ ಮತ್ತೊಂದು ದುರಂತ : ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು

ಮೈಸೂರು : ಕಾಂಕ್ರೀಟ್ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಆನೆಮಾಳ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸಿದ್ದಪ್ಪಾಜಿ ರಸ್ತೆಯ ನಿವಾಸಿ ಪ್ರವೀಣ್ (27) ಎಂದು ಗುರುತಿಸಲಾಗಿದೆ. ಕಾಂಕ್ರೀಟ್ ರಸ್ತೆ ಕಾಮಗಾರಿ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಪ್ರವೀಣ್ ಮೃತಪಟ್ಟಿದ್ದಾರೆ. ಈ ಸಂಬಂಧ ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ಇತ್ತೀಚೆಗೆ ನಡೆದಿತ್ತು. ಕತ್ತಲಲ್ಲಿ ರಸ್ತೆ ಮೇಲೆ ಕಟ್ ಆಗಿ ಬಿದ್ದಿದ್ದ ಕರೆಂಟ್ ವೈರ್ ಕಾಣದೇ ವೈರ್ ಮೇಲೆಯೇ ಕಾಲಿಟ್ಟ ಪರಿಣಾಮ ಏಕಾಏಕಿ ವಿದ್ಯುತ್ ಪ್ರವಹಿಸಿ ತಾಯಿ-ಮಗಳು ಇಬ್ಬರು ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...