ಕುಂಭಮೇಳಕ್ಕೆ ಹೋಗುತ್ತಿದ್ದ ಕ್ರೂಸರ್ ವಾಹನ ಮಧ್ಯಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಬೆಳಗಾವಿ ಮೂಲದ ನಾಲ್ವರು ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ನಿಂತಿದ್ದ ಬಸ್ ಗೆ ಕ್ರೂಸರ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.ಬಾಲಚಂದ್ರ ಗೌಡರ, ಬಸವರಾಜ ಕುರಟ್ಟಿ ಸೇರಿ ಒಟ್ಟು 4 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು,ಅವರನ್ನು ಮಧ್ಯಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಲಾಪುರ ಪೆಹರಾ ಟೋಲ್ ಬಳಿ ಈ ದುರ್ಘಟನೆ ಸಂಭವಿಸಿದೆ. 2 ದಿನದ ಹಿಂದೆ ಗೋಕಾಕ್’ನಿಂದ ಪ್ರಯಾಗ್ ರಾಜ್ ಗೆ ಅವರು ಪ್ರಯಾಣ ಬೆಳೆಸಿದ್ದರು.