ಭೀಮಾತೀರದ ಹಂತಕ ‘ಬಾಗಪ್ಪ ಹರಿಜನ’ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ವಿಜಯಪುರದ 2 ನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಪಿಂಟ್ಯಾ ಅಗರಖೇಡ್ (25) @ಪ್ರಕಾಶ್ , ರಾಹುಲ್ ತಳಕೇರಿ (20), ಮಣಿಕಂಠ ದನಕೊಪ್ಪ(27) ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು. ವಿಜಯಪುರದ ಗಾಂಧಿಚೌಕ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.
ವಿಜಯಪುರದ ಮದೀನಾ ನಗರದಲ್ಲಿ ಭೀಮಾ ತೀರದ ಹಂತಕ ಬಾಗಪ್ಪ ಹರಿಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.