alex Certify BUDGET BREAKING : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣದ ಗುರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BUDGET BREAKING : ವಸತಿ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣದ ಗುರಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.

ರಾಜ್ಯ ಸರ್ಕಾರವು ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ  ನೀಡಿದ್ದು, 2024-25 ರಲ್ಲಿ 3 ಲಕ್ಷ ಮನೆ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ಕ್ಷೇತ್ರ ವರುಣಾ ಕ್ಷೇತ್ರಕ್ಕೆ ಎರಡು ಸಾವಿರಕೋಟಿ ರೂ. ಮೀಸಲು, ಕಾಲುವೆಗಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...