ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಲೋಕ ಪ್ರಕಾಶನ ಆಯೋಜಿಸಿದ್ದ ಪುಸ್ತಕ ಸಂತೆಯನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ. ಪುಸ್ತಕ ಮತ್ತು ಪತ್ರಿಕೆಗಳನ್ನು ಕೊಂಡು ಓದುವ ಅಭಿರುಚಿ ಮತ್ತು ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.
ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ರಾಮಲಿಂಗಾರೆಡ್ಡಿ, ಲೇಖಕರಾದ ಬರಗೂರು ರಾಮಚಂದ್ರಪ್ಪ, ಮಾಜಿ ಸಂಸದರಾದ ಉಗ್ರಪ್ಪ ಮತ್ತು ಪತ್ರಿಕಾ ಸಂಪಾದಕರಾದ ವಿಶ್ವೇಶ್ವರ ಭಟ್ ಸೇರಿ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.