alex Certify BREAKING : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು : ನಟ ಶಿವರಾಜ್ ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.

ನಟ ಶಿವರಾಜ್ ಕುಮಾರ್ ಅವರು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಆದ್ದರಿಂದ ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ನೀಡಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದಾರೆ. ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದರು. ಭದ್ರಾವತಿಯಿಂದ ಪ್ರಚಾರ ಆರಂಭಿಸಿದ ಗೀತಾ ಶಿವರಾಜ್ ಕುಮಾರ್ ತಮಗೆ ಮತ ಹಾಕುವಂತೆ ಮತಯಾಚನೆ ಮಾಡಿದ್ದರು. ರ್ಯಾಲಿಯಲ್ಲಿ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಮತ್ತಿತರರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...