alex Certify BREAKING : ವಿಜಯನಗರದಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ ಮಗು ಸೇರಿ ಐವರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಜಯನಗರದಲ್ಲಿ ಘೋರ ದುರಂತ : ಕಲುಷಿತ ನೀರು ಸೇವಿಸಿ ಮಗು ಸೇರಿ ಐವರು ಸಾವು.!

ವಿಜಯನಗರ : ಕಲುಷಿತ ನೀರು ಸೇವಿಸಿ ನವ ಜಾತ ಶಿಶು ಸೇರಿ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38) ಹಾಗೂ 8 ತಿಂಗಳ ಗಂಡು ಮಗು ಮೃತಪಟ್ಟಿದೆ. ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದ ಜನ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮದ ಜನರು ಆಗ್ರಹಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...