ಬೆಂಗಳೂರು : ಕಿರುತೆರೆ ನಟನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ನಡೆದಿದೆ.
ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟ ಚರಿತ್ ಬಾಳಪ್ಪ ಮೇಲೆ ಪಕ್ಕದ ಮನೆಯ ವ್ಯಕ್ತಿಯೊಬ್ಬ ಹಲ್ಲೆ ಮಾಡಿ ನಟನ ಕೈ ಬೆರಳಿಗೆ ಗಾಯ ಮಾಡಿದ್ದಾನೆ. ಅನ್ನಪೂರ್ಣೇಶ್ವರಿ ನಗರದಲ್ಲಿ ಫೆ,23 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶೂಟಿಂಗ್ ಗೆ ಹೋಗುವಾಗ ನಟ ಚರಿತ್ ಬಾಳಪ್ಪ ಪಕ್ಕದ ಮನೆಯವರ ಜಾಗದಲ್ಲಿ ಕಸ ಇಟ್ಟಿದ್ದಾರೆ ಎನ್ನಲಾಗಿದ್ದು, ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು, ಜಗಳ ತಾರಕಕ್ಕೇರಿದೆ. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.