alex Certify BREAKING : ಮಾಜಿ ಬಿಗ್ ಬಾಸ್ ಸ್ಪರ್ಧಿಗೂ ‘ಹುಲಿ ಉಗುರಿನ ಸಂಕಷ್ಟ’ : ಆರ್ಯವರ್ಧನ್ ಗುರೂಜಿ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಾಜಿ ಬಿಗ್ ಬಾಸ್ ಸ್ಪರ್ಧಿಗೂ ‘ಹುಲಿ ಉಗುರಿನ ಸಂಕಷ್ಟ’ : ಆರ್ಯವರ್ಧನ್ ಗುರೂಜಿ ಮನೆ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಬೆಂಗಳೂರು : ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿಗೂ ಹುಲಿ ಉಗುರು ಸಂಕಷ್ಟ ಎದುರಾಗಿದೆ.

ಹೌದು, ಆರ್ಯವರ್ಧನ್ ಗುರೂಜಿ ಈ ಹಿಂದೆ ಬಿಗ್ ಬಾಸ್-9 ರ ಸ್ಪರ್ಧಿಯಾಗಿ ಹೋಗಿದ್ದರು. ಇದೀಗ ಮಾಜಿ ಬಿಗ್ ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿಗೂ ಹುಲಿ ಉಗುರು ಸಂಕಷ್ಟ ಎದುರಾಗಿದೆ.

ಹುಲಿ ಉಗುರಿನ ಲಾಕೆಟ್ ಧರಿಸಿದ್ದ ಆರೋಪ ಹಿನ್ನೆಲೆ ಬೆಂಗಳೂರಿನ ಚಾಮರಾಜಪೇಟೆಯ ನಿವಾಸದಲ್ಲಿ ಅರಣ್ಯಾಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಆರ್ಯವರ್ಧನ್ ಬಳಿ ಇದ್ದ ಪೆಂಡೆಂಟ್ನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಆರ್ಯವರ್ಧನ್ ಹೇಳಿಕೆಯನ್ನು ಅರಣ್ಯ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವರ್ತೂರು ಸಂತೋಷ್ ಬಂಧನದ ಬಳಿಕ ಹಲವು ನಟ, ರಾಜಕೀಯ ವ್ಯಕ್ತಿಗಳು ಧರಿಸಿದ್ದ ಹುಲಿ ಉಗುರಿನ ಫೋಟೋ ವೈರಲ್ ಆಗಿದ್ದು, ಅರಣ್ಯಾಧಿಕಾರಿಗಳು ಹುಲಿ ಉಗುರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...