ಬೆಳಗಾವಿ : ರೈತನೊಬ್ಬ ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ರೈತರೊಬ್ಬರು ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಕಂಕನವಾಡಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ನೀಲಕಂಠಯ್ಯ ಎಂಬಾತ ಜಮೀನು ತನ್ನದು ಕಟಾವು ಮಾಡಬೇಡ ಎಂದು ಹೇಳಿದ್ದಾನೆ. ಈ ವೇಳೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದ ವೇಳೆ ಪೊಲೀಸರ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದಾನೆ.