alex Certify BREAKING : ಸಂಸದೆ ಸುಮಲತಾ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ ; 5 ವರ್ಷದ ಜಿದ್ದಾಜಿದ್ದಿಗೆ ಇತಿಶ್ರೀ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಂಸದೆ ಸುಮಲತಾ ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ ; 5 ವರ್ಷದ ಜಿದ್ದಾಜಿದ್ದಿಗೆ ಇತಿಶ್ರೀ.!

ಬೆಂಗಳೂರು : ಸಂಸದೆ ಸುಮಲತಾ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.

ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ನಿವಾಸಕ್ಕೆ ಹೆಚ್ಡಿಕೆ ಆಗಮಿಸಿದ್ದು, ಮಾಜಿ ಸಿಎಂ ಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಸ್ವಾಗತ ಕೋರಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಅವರು ಸುಮಲತಾರನ್ನು ಭೇಟಿ ಮಾಡಿ ಮಂಡ್ಯ ಕ್ಷೇತ್ರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಿದ್ದಾರೆ. ಮಾಜಿ ಸಿಎಂ ಹೆಚ್ಡಿಕೆ ಜೊತೆ ಎಂಎಲ್ಸಿ ಟಿ ಎ ಶರಣವಣ ಕೂಡ ಬಂದಿದ್ದಾರೆ.

ಸುಮಲತಾ ಅವರನ್ನು ಭೇಟಿಯಾದ ಹೆಚ್ಡಿಕೆ ಕಳೆದ 5 ವರ್ಷದ ಜಿದ್ದಾಜಿದ್ದಿಗೆ ಇತಿಶ್ರೀ ಹಾಡಿದ್ದಾರೆ. ಮಂಡ್ಯ ಕ್ಷೇತ್ರಕ್ಕೆ ಬೆಂಬಲ ನೀಡುವಂತೆ ಕುಮಾರಸ್ವಾಮಿ ಅವರು ಸುಮಲತಾ ಜೊತೆ ಚರ್ಚೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...