ಗದಗ : ಗದಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಹರಿದು 6 ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ.
ಗದಗ ತಾಲೂಕಿನ ಹರ್ತಿ ಗ್ರಾಮದ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ತಾಯಿ ಜೊತೆ ಬಂದಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದಿದೆ.
ಟಿಪ್ಪರ್ ಹರಿದ ಪರಿಣಾಮ ಹಿಂಡಸಗೇರಿ ಗ್ರಾಮದ ಪ್ರೀತಮ್ (6) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆಕ್ರೋಶಗೊಂಡ ಗ್ರಾಮದ ಜನ ಗದಗ-ಲಕ್ಷ್ಮೇಶ್ವರ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.