alex Certify BREAKING : ‘ಗೋಲ್ಡ್ ಸ್ಮಗ್ಲಿಂಗ್’ ಕೇಸ್ : ಮಾ.27 ಕ್ಕೆ ನಟಿ ರನ್ಯಾರಾವ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಗೋಲ್ಡ್ ಸ್ಮಗ್ಲಿಂಗ್’ ಕೇಸ್ : ಮಾ.27 ಕ್ಕೆ ನಟಿ ರನ್ಯಾರಾವ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್.!

ಬೆಂಗಳೂರು : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾ.27 ಕ್ಕೆ ನಟಿ ರನ್ಯಾರಾವ್ ಜಾಮೀನು ಆದೇಶ ಕಾಯ್ದಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ನಟಿ ರನ್ಯಾರಾವ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 64 ನೇ ಸಿಸಿಹೆಚ್ ಕೋರ್ಟ್ ವಾದ ವಿವಾದವನ್ನು ಆಲಿಸಿತ್ತು. ನಂತರ ಮಾ.27 ಕ್ಕೆ ನಟಿ ರನ್ಯಾರಾವ್ ಜಾಮೀನು ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು..ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.ಪ್ರಕರಣದಲ್ಲಿ ಜಾಮೀನು ಕೋರಿ ರನ್ಯಾರಾವ್ ಅರ್ಜಿ ಸಲ್ಲಿಸಿದ್ದಾರೆ. ನಟಿ ರನ್ಯಾರಾವ್ ಗೆ ಬೇಲ್ ಸಿಗುತ್ತಾ..? ಮತ್ತೆ ಜೈಲು ಫಿಕ್ಸಾ..? ಎಂಬುದನ್ನು ಕಾದು ನೋಡಬೇಕಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...