alex Certify BREAKING : ರಾಯಚೂರಿನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ‘ಗುರೂಜಿ’ ಅರೆಸ್ಟ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರಿನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದ ‘ಗುರೂಜಿ’ ಅರೆಸ್ಟ್..!

ರಾಯಚೂರು : ಪೆನ್ನು ಕದ್ದ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಯನ್ನು ರೂಮಿನಲ್ಲಿ ಕೂಡಿ ಹಾಕಿ ಮನಬಂದಂತೆ ಥಳಿಸಿ ವಿಕೃತಿ ಮೆರೆದ ಗುರೂಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರಿನ ರಾಮಕೃಷ್ಣ ಆಶ್ರಮದ ಗುರೂಜಿ ಇಂತಹ ಕೃತ್ಯ ಎಸಗಿದ್ದು,ವಿದ್ಯಾರ್ಥಿಯನ್ನು ಥಳಿಸಿ, ಕೂಡಿಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದರು. ಈ ಹಿನ್ನೆಲೆ ವಿಕೃತ ಗುರೂಜಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶ್ರವಣ ಕುಮಾರ್ ಎಂಬ ವಿದ್ಯಾರ್ಥಿ ಹಲ್ಲೆಗೊಳಗಾಗಿದ್ದು, ಗುರೂಜಿ ಹೊಡೆದ ಏಟಿಗೆ ಬಾಲಕನ ಕಣ್ಣುಗಳು, ಮುಖ ಊದಿಕೊಂಡಿವೆ. ಆಶ್ರಮದಲ್ಲಿ ತಂಗಿದ್ದ ಶ್ರವಣ ಕುಮಾರ್ ಸಹಪಾಠಿಗಳ ಜೊತೆ ಆಟವಾಡುತ್ತ ಪೆನ್ನು ಕದ್ದಿದ್ದನಂತೆ. ಈ ವಿಚಾರವನ್ನು ಸಹಪಾಠಿಗಳು ಆಶ್ರಮದ ಗುರೂಜಿಗೆ ತಿಳಿಸಿದ್ದಾರೆ. ಆಶ್ರಮದ ಗುರೂಜಿ ವೇಣುಗೋಪಾಲ ಎಂಬುವವರು ವಿದ್ಯಾರ್ಥಿ ಶ್ರವಣ ಕುಮಾರ್ ನನ್ನು ಕರೆದು ವಿಚಾರಿಸಿ ಥಳಿಸಿದ್ದಾರೆ. 3-4 ದಿನ ಕತ್ತಲೆ ಕೋಣೆಯಲ್ಲಿ ಕೂಡಿ ಕಣ್ಣುಗುಡ್ಡೆಗಳಿಗೆ ಏಟು ಕೊಟ್ಟು ಮನಬಂದಂತೆ ಥಳಿಸಿ ವಿಕೃತಿ ಮೆರೆದಿದ್ದಾರೆ.ಪಶ್ಚಿಮ ಠಾಣೆ ಪೊಲೀಸರು ಆರೋಪಿ ಗುರೂಜಿ ವೇಣುಗೋಪಾಲನನ್ನ ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...