alex Certify BREAKING : ಮಹಾಮಳೆಗೆ ಮಂಗಳೂರಲ್ಲಿ ಇಬ್ಬರು ಬಲಿ ; ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲೇ ಆಟೋ ಚಾಲಕರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಹಾಮಳೆಗೆ ಮಂಗಳೂರಲ್ಲಿ ಇಬ್ಬರು ಬಲಿ ; ವಿದ್ಯುತ್ ತಂತಿ ಬಿದ್ದು ಸ್ಥಳದಲ್ಲೇ ಆಟೋ ಚಾಲಕರು ಸಾವು.!

ಮಂಗಳೂರು : ಮಹಾಮಳೆಗೆ ಇಬ್ಬರು ಬಲಿಯಾದ ಘಟನೆ ಮಂಗಳೂರಿನ ಪಾಂಡೇಶ್ವರದಲ್ಲಿ ನಡೆದಿದೆ.

ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನ ರಕ್ಷಿಸಲು ಹೋದ ಮತ್ತೋರ್ವ ಆಟೋ ಚಾಲಕ ಸೇರಿ ಇಬ್ಬರು ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಮೃತ ರಿಕ್ಷಾ ಚಾಲಕರು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಮತ್ತು ಪುತ್ತೂರು ರಾಜು ಎಂದು ಗುರುತಿಸಲಾಗಿದೆ.

ಆಟೋ ಚಾಲಕರೊಬ್ಬರು ಆಟೋ ತೊಳೆಯುತ್ತಿರುವ ಸಂದರ್ಭದಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಅವರ ಮೇಲೆ ಬಿದ್ದಿದೆ. ತಕ್ಷಣ ಅವರಿಗೆ ವಿದ್ಯುತ್ ಶಾಕ್ ತಗುಲಿದ್ದು ಇದನ್ನು ನೋಡಿದ ಮತ್ತೊಬ್ಬ ರಿಕ್ಷಾ ಚಾಲಕರು ಪ್ರಾಣ ಉಳಿಸಲು ಹೋಗಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ ಮಂಗಳೂರಿನ ಪಾಂಡೇಶ್ವರದಲ್ಲಿ ಈ ದುರ್ಘಟನೆ ನಡೆದಿದ್ದು, ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...