alex Certify BREAKING : ಮಂಡ್ಯದಲ್ಲಿ ಘೋರ ದುರಂತ ; ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಡ್ಯದಲ್ಲಿ ಘೋರ ದುರಂತ ; ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ದುರ್ಮರಣ

ಮಂಡ್ಯ : ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ.

ಪ್ರವಾಸಕ್ಕೆಂದು 40 ಮಂದಿ ಒಂದೇ ಬಸ್ ನಲ್ಲಿ ಆಗಮಿಸಿದ್ದರು. ಈ ವೇಳೆ ಓರ್ವ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದಾನೆ, ಆದರೆ ಆತ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲು ಆರಂಭಿಸಿದ್ದಾನೆ. ಕೂಡಲೇ ಆತನ ರಕ್ಷಣೆಗೆ ಮೂವರು ತೆರಳಿದ್ದು, ನಾಲ್ವರು ಕೂಡ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಮೃತರನ್ನು ನಾಗೇಶ್, ಭರತ್, ಗುರು, ಮಹಾದೇವ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಶವಕ್ಕಾಗಿ ಶೋಧ ನಡೆಸಲಾಗುತ್ತಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.  ಮೈಸೂರಿನ ಕನಕಗಿರಿಯಿಂದ ಮುತ್ತತ್ತಿ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...