alex Certify BREAKING : ರಾಜ್ಯದಲ್ಲಿ ಮುಂದುವರೆದ ಮಾನವ –ವನ್ಯಜೀವಿಗಳ ಸಂಘರ್ಷ : ಹುಲಿ ದಾಳಿಗೆ ವ್ಯಕ್ತಿ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮುಂದುವರೆದ ಮಾನವ –ವನ್ಯಜೀವಿಗಳ ಸಂಘರ್ಷ : ಹುಲಿ ದಾಳಿಗೆ ವ್ಯಕ್ತಿ ಬಲಿ

ಚಾಮರಾಜನಗರ : ರಾಜ್ಯದಲ್ಲಿ ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ತೀವ್ರ ಹೆಚ್ಚಾಗಿದೆ. ಹುಲಿ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಚಾಮರಾಜನಗರದಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹಾಡಿನಕಣಿವೆ ಪೋಡು ಎಂಬಲ್ಲಿ ಈ ಘಟನೆ ಸಂಭವಿಸಿದೆ . ಮನೆಯಿಂದ ಹೊರಗೆ ಹೋಗಿದ್ದ ಬಸವ (50) ಎಂಬ ವ್ಯಕ್ತಿ ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಹಿನ್ನೆಲೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಜನರು ಮನೆಯಿಂದ ಹೊರಗೆ ಹೋಗಲು ಭಯಪಡುತ್ತಿದ್ದಾರೆ. ಹುಲಿ ಸೆರೆಹಿಡಿಯುವಂತೆ ಗ್ರಾಮದ ಜನರು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...